
ಕೆ ಆರ್ ಪೇಟೆ: ಸರ್ಕಾರಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದಲ್ಲಿ ಅಂಗಡಿ ಕಬ್ಬಿಣ ಪೆಟ್ಟಿಗೆ ಪ್ರತ್ಯೇಕ್ಷವಾಗಿದೆ ಎಂದು ಎಂದು ರೈತ ಸಂಘದವರು ಆರೋಪ ಮಾಡಿದರು.ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದಲ್ಲಿರುವ ಹೋಟೆಲ್ ಹಾಗೂ ಟಿ ಸಿ ಕಚೇರಿಯ ನಡುವೆ ಅಂಗಡಿ ಪೆಟ್ಟಿಗೆಯನ್ನು ಇಡಲು ಟೆಂಡರ್ ಕರೆಯಲಾಗಿದೆ. ಆದರೆ ಸಾರ್ವಜನಿಕ ಪ್ರಯಾಣಿಕರು ಓಡಾಡುವ ಕುಳಿತುಕೊಳ್ಳುವ ಜಾಗದಲ್ಲಿ ಕಬ್ಬಿಣ ಅಂಗಡಿ ಪೆಟ್ಟಿಗೆ ಇಟ್ಟಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ ಎಂದು ಸಾರ್ವಜನಿಕರಿಂದ ದೂರು ಬಂದಿರುವ ಅಂಗವಾಗಿ ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಹಿತ ರಕ್ಷಣಾ ವೇದಿಕೆಯ ಪದಾಧಿಕಾರಿಗಳು ಬಸ್ ಡಿಪೋ ವ್ಯವಸ್ಥಾಪಕರಿಗೆ,ತಹಶಿಲ್ದಾರ್ ಅವರಿಗೆ, ಪುರಸಭಾ ಅಧಿಕಾರಿಗಳಿಗೆ ಅಂಗಡಿ ಪೆಟ್ಟಿಗೆಯನ್ನು ತೆರವು ಗೊಳಿಸಿ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕೆಂದು ಮನವಿ ಪತ್ರವನ್ನು ನೀಡಿದರು.ಬಳಿಕ ಮಾತನಾಡಿದ ರಾಜ್ಯ ರೈತ ಕಾರ್ಮಿಕರ ಹಿತ ರಕ್ಷಣಾ ವೇದಿಕೆ ತಾಲ್ಲೂಕು ಅಧ್ಯಕ್ಷ ಮಂಜೇಗೌಡ ಮಾತನಾಡಿ ಈಗಾಗಲೇ ಟೆಂಡರ್ ಪ್ರಕ್ರಿಯೆಯಲ್ಲಿ ನಿಗಧಿ ಪಡಿಸಿರುವ ಅಳತೆಗಿಂತ ಹೆಚ್ಚಿನ ಅಳತೆಯ ಪೆಟ್ಟಿಗೆ ನಿರ್ಮಾಣ ಮಾಡಿದ್ದಲ್ಲದೇ ಸಾರ್ವಜನಿಕರು,ವಿದ್ಯಾರ್ಥಿಗಳು, ವೃದ್ಧರು ಕುಳಿತುಕೊಳ್ಳುವ ಓಡಾಡುವ ಜಾಗದಲ್ಲಿ ಕಬ್ಬಿಣ ಅಂಗಡಿಯನ್ನು ಇಟ್ಟಿರುವ ಸಂಬಂಧಿಸಿದಂತೆ ಸಾರ್ವಜನಿಕರಿಂದ ನಮಗೆ ದೂರು ಬಂದ ಕಾರಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಲ್ಲದೇ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ, ತಹಶಿಲ್ದಾರ್, ಪುರಸಭೆಯ ಅಧಿಕಾರಿಗಳಿಗೆ ಮನವಿ ಪತ್ರವನ್ನು ನೀಡಿದ್ದೇವೆ.ಒಂದು ವಾರದ ಒಳಗಡೆ ಕಬ್ಬಿಣದ ಅಂಗಡಿಯನ್ನು ತೆರವು ಗೊಳಿಸದಿದ್ದರೆ ಇದೇ ಜಾಗದಲ್ಲಿ ಧರಣಿಯನ್ನು ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಕಾರ್ಮಿಕರ ಹಿತ ರಕ್ಷಣಾ ವೇದಿಕೆ ಹಾಸನ ಜಿಲ್ಲಾ ಗೌರವಾಧ್ಯಕ್ಷ ಪ್ರಕಾಶ್,ವೇದಿಕೆ ಸಂಸ್ಥಾಪಕ ಅಧ್ಯಕ್ಷಮಂಜೇಗೌಡ ಬಡಕನಹಳ್ಳಿ,ಜಿಲ್ಲಾಧ್ಯಕ್ಷ ಪುಟ್ಟೇಗೌಡ,ತಾಲ್ಲೂಕು ಅಧ್ಯಕ್ಷ ಗಿರೀಶ್,ಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು.

RELATED ARTICLES
