ಕೃಷ್ಣರಾಜ ಸಂಚಾರ ಪೊಲೀಸ್ ಠಾಣೆ ರವರಿಂದ
ಇಂದು ನಂಜುಮಳಿಗೆಯಿಂದ ಶ್ರೀನಿವಾಸ ವೃತ್ತದವರೆಗೆ ರಸ್ತೆ ಎರಡೂ ಬದಿಗಳಲ್ಲಿ ವ್ಯಾಪಾರಿಗಳು ಹಾಕಿದ್ದ ವಸ್ತುಗಳನ್ನು ತೆರವುಗೊಳಿಸಲಾಯಿತು. ಈ ಕ್ರಮದಿಂದ ವಾಹನ ಸಂಚಾರಕ್ಕೆ ಅಡ್ಡಿಯಾಗುತ್ತಿದ್ದ ಅಡೆತಡೆಗಳು ನಿವಾರಣೆಯಾಗಿದ್ದು, ಸಾರ್ವಜನಿಕರಿಗೆ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಸಂಚಾರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳದಲ್ಲೇ ಕಾರ್ಯಾಚರಣೆ ನಡೆಸಿ, ವ್ಯಾಪಾರಿಗಳಿಗೆ ಸಾರ್ವಜನಿಕ ಹಿತದೃಷ್ಟಿಯಿಂದ ರಸ್ತೆಗಳನ್ನು ಮುಕ್ತವಾಗಿಡುವಂತೆ ತಿಳಿಸಿದರು. ನಾಗರಿಕರ ಸುರಕ್ಷತೆ ಮತ್ತು ಸಂಚಾರದ ಸುಗಮತೆಗಾಗಿ ಇಂತಹ ಕ್ರಮಗಳನ್ನು ಮುಂದುವರಿಸಲಾಗುವುದು ಎಂದು ಠಾಣೆ ಮೂಲಗಳು ತಿಳಿಸಿವೆ.
